ಬೆಂಗಳೂರಿನಲ್ಲಿ ಮಿತಿಮೀರಿದ ಕಿಡಿಗೇಡಿಗಳ ಅಟ್ಟಹಾಸ; ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು – Kannada News | Miscreants set fire to the bikes parked in front of the house in Bangalore
ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ.
ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಬೆಂಗಳೂರು, ಆ.6: ಮಹಾನಗರದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದಂತೆ ಕಾಣುತ್ತದೆ. ದಿನವೂ ಒಂದಿಲ್ಲೊಂದು ಅಪರಾಧ ಕೃತ್ಯಗಳು ನಡೆಯುತ್ತಲೇ ಇದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಹೌದು, ಮನೆ ಮುಂದೆ ನಿಲ್ಲಿಸಿದ್ದ ಬೈಕ್(Bike)ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ವಸಂತನಗರ(Vasanthanagar)ದಲ್ಲಿ ಬೆಳಗಿನ ಜಾವ 5 ಗಂಟೆ ವೇಳೆಗೆ ನಡೆದಿದೆ. ಇನ್ನು ಮೂವರು ಕಿಡಿಗೇಡಿಗಳು ಸೇರಿ ಬೆಂಕಿ ಹಚ್ಚಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಘಟನೆ ಕುರಿತು ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬ್ಯಾಟರಿ ಸ್ಫೋಟಗೊಂಡು ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್
ಚಾಮರಾಜನಗರ: ಬ್ಯಾಟರಿ ಸ್ಫೋಟಗೊಂಡು ಎಲೆಕ್ಟ್ರಿಕ್ ಬೈಕ್ ಹೊತ್ತಿ ಉರಿದ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ನಡೆದಿದೆ. ಒಂದು ವರ್ಷದ ಹಿಂದೆ ಬಸವರಾಜಪ್ಪ ಎನ್ನುವವರು ಅಕಿನೋವ್ ಬೈಕ್ ಖರೀದಿಸಿದ್ದರು. ಇದೀಗ ಓವರ್ ಹೀಟ್ನಿಂದಾಗಿ ಬೈಕ್ನ ಬ್ಯಾಟರಿ ಸ್ಫೋಟಗೊಂಡ ಕುರಿತು ಮಾಹಿತಿ ಸಿಕ್ಕಿದೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಾರ್ಜ್ಗೆ ಹಾಕಿದ ಹತ್ತೆ ನಿಮಿಷದಲ್ಲಿ ಸ್ಪೋಟಗೊಂಡ ಬೈಕ್ ಬ್ಯಾಟರಿ
ಇನ್ನು ಬೈಕ್ ಚಾರ್ಜ್ಗೆ ಹಾಕಿದ ಹತ್ತೆ ನಿಮಿಷದಲ್ಲಿ ಬೈಕ್ ಬ್ಯಾಟರಿ ಸ್ಪೋಟಗೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ. ಬೈಕ್ ಹೊತ್ತಿ ಉರಿಯುತ್ತಿದ್ದಂತೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬ್ಯಾಟರಿ ಓವರ್ ಹೀಟ್ ಆದ ಪರಿಣಾಮದಿಂದ ಸ್ಪೋಟವಾಗಿದೆಯೆಂದು ಬೆಳಕಿಗೆ ಬಂದಿದೆ. ಇನ್ನು ಬ್ಯಾಟರಿ ಸ್ಪೋಟಗೊಳ್ಳುವ ವಿಡಿಯೋ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ.
Published On – 11:46 am, Sun, 6 August 23