Mask Up: ‘ಅವನೇ ಶ್ರೀಮನ್ನಾರಾಯಣ‘ ಹಾಡು ಬಳಸಿ ಕೊರೋನಾ ಜಾಗೃತಿ ಮೂಡಿಸುತ್ತಿರುವ ಬೆಂಗಳೂರು ಸಿಟಿ ಪೊಲೀಸರು
ಕೊರೋನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಂಗಳೂರು ಸಿಟಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಸದ್ಯ ಸಿನಿಮಾ ಹಾಡುಗಳನ್ನು ಬಳಸಿಕೊಂಡು ಜನರಿಗೆ ಎಚ್ಚರಿಕೆಯಿಂದ ಇರುವಂತೆ ಪೋಸ್ಟರ್ ಮೂಲಕ ತಿಳಿಸಿದ್ದಾರೆ.
ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ‘ ಸಿನಿಮಾದಲ್ಲಿನ ‘ಚರಿತ್ರೆ ಸೃಷ್ಠಿಸುವ ಅವತಾರ‘ ಹಾಡನ್ನು ಬಳಸಿಕೊಂಡು ಕೊರೋನಾ ಕುರಿತು ಜಾಗೃತಿ ಮೂಡಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ನಲ್ಲಿ ಸಿಟಿ ಪೊಲೀಸ್ ಟ್ವೀಟ್ ಕೂಡ ಮಾಡಿದ್ದು, ಇದು ಚರಿತ್ರೆ ಸೃಷ್ಠಿಸೊ ಅವತಾರ, ಮಾಸ್ಕ್ ಅಪ್ ಅದುವೆ ಸಿದ್ಧಾಂತ, ಹ್ಯಾಂಡ್ ವಾಷ್, ಈಗಿನ ವೇದಾಂತ ಎಂದು ಹೇಳಿದ್ದಾರೆ. ಇನ್ನು ಪೋಸ್ಟರ್ನಲ್ಲಿ ‘ಕೇಳಿ ಕಾದಿರುವ ಬಾಂಧವರೇ, ಭುವಿಯಲ್ಲಿ ಕೊರೋನಾ ಅರಿತವರೇ, ಮನೆಯಲ್ಲಿ ಇರಿ, ಸುರಕ್ಷಿತವಾಗಿರಿ, ಹೊರ ಬಂದರೇ ಅಷ್ಟೇ ಎಂದು ಬೆಂಗಳೂರು ಸಿಟಿ ಪೊಲೀಸರು ಜಾಗೃತಿ ಮೂಡಿಸಿದ್ದಾರೆ. ನಟ ರಕ್ಷಿತ್ ಶೆಟ್ಟಿಗು ಕೂಡ ಟ್ಯಾಗ್ ಮಾಡಿದ್ದಾರೆ.