EBM News Kannada
Leading News Portal in Kannada

ಇನ್ನೇನು ಅಂತ್ಯಕ್ರಿಯೆ ನಡೆಸಬೇಕು ಅನ್ನುವಷ್ಟರಲ್ಲಿ ಕಣ್ಣು ತೆರೆದ ಬಿಜೆಪಿ ಮುಖಂಡ – Kannada News | Uttar Pradesh: Former BJP Leader Mahesh Baghel Declared Dead by Doctors In Agra, Found Alive After Brought Home

0


ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಹೇಶ್ ಬಾಘೇಲ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ವೈದ್ಯರು ಬಾಘೇಲ್ ಅವರು ಮೃತಪಟ್ಟಿದ್ದಾರೆ, ಶವವನ್ನು ಮನೆಗೆ ತೆಗೆದುಕೊಂಡು ಹೋಗಿ ಎಂದು ಹೇಳಿಬಿಟ್ಟರು.

ಮಹೇಶ್​ ಬಾಘೇಲ್

ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಹೇಶ್ ಬಾಘೇಲ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ವೈದ್ಯರು ಬಾಘೇಲ್ ಅವರು ಮೃತಪಟ್ಟಿದ್ದಾರೆ, ಶವವನ್ನು ಮನೆಗೆ ತೆಗೆದುಕೊಂಡು ಹೋಗಿ ಎಂದು ಹೇಳಿಬಿಟ್ಟರು.
ಮನೆಯವರೆಲ್ಲರೂ ದುಃಖವನ್ನು ಕಣ್ಣಲ್ಲಿ ತುಂಬಿಕೊಂಡು ಮನೆಗೆ ಹೊರಟರು, ಮನೆಯಲ್ಲಿ ಅಂತ್ಯಕ್ರಿಯೆಗೆ ತಯಾರಿ ನಡೆಯುತ್ತಿತ್ತು, ಆ ಸಮಯದಲ್ಲಿ ಬಾಘೇಲ್ ಅವರ ದೇಹದಲ್ಲಿ ಚಲನವಲಗಳು ಕಾಣಿಸಿತ್ತು. ಈಗ ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆರೋಗ್ಯ ಸ್ಥಿರವಾಗಿದೆ.

ಬಾಘೇಲ್ ಕಣ್ಣು ತೆರೆದಾಗ ಸಂಬಂಧಿಕರು ರೋದಿಸುತ್ತಿದ್ದರು ಮತ್ತು ಅವರ ದೇಹದಲ್ಲಿ ಚಲನೆ ಕಂಡುಬಂದಿತ್ತು. ಇದನ್ನು ಕಂಡು ಖುಷಿ ಪಟ್ಟ ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ. ಸಹೋದರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಾಘೆಲ್ ಅವರ ಕಿರಿಯ ಸಹೋದರ ಲಖನ್ ಸಿಂಗ್ ಬಾಘೇಲ್ ತಿಳಿಸಿದ್ದಾರೆ. ಬಿಪಿ ಸಹಜ ಸ್ಥಿತಿಯೊಲ್ಲಿದೆ ಎಂದರು. ಉತ್ತಮ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.

ಮಹೇಶ್ ಬಾಘೇಲ್ ಅವರನ್ನು ಪುಷ್ಪಾಂಜಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಇದರ ನಂತರ, ಅವರನ್ನು ಸರಾಯ್ ಖ್ವಾಜಾ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಮನೆ ತಲುಪಿದ ನಂತರ ಪ್ರಜ್ಞೆ ಬಂದು ಕಣ್ಣು ತೆರೆದರು ಎಂದು ಅವರ ಮಕ್ಕಳಾದ ಅಭಿಷೇಕ್ ಮತ್ತು ಅಂಕಿತ್ ಹೇಳಿದ್ದಾರೆ.

ಇದನ್ನು ಕಂಡ ಕುಟುಂಬಸ್ಥರಲ್ಲಿ ಸಂತಸದ ಅಲೆಯೊಂದು ಹರಿಯಿತು. ಬಾಘೇಲ್ ಅವರ ನಿಧನದ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸಲು ಪ್ರಾರಂಭಿಸಿದ್ದರು.

ತಾಜಾ ಸುದ್ದಿ

Leave A Reply

Your email address will not be published.