EBM News Kannada
Leading News Portal in Kannada

​ಕೋವಿಡ್‌-19: ಪತ್ರಕರ್ತರಿಗೆ 15 ಲಕ್ಷ ರೂ ಜೀವ ವಿಮೆ ಘೋಷಿಸಿದ ಒರಿಸ್ಸಾ ಸರ್ಕಾರ

0

ನವದೆಹಲಿ(ಏ.27): ಮಾರಕ ಕೊರೋನಾ ವೈರಸ್​​ ವಿರುದ್ಧ ವೈದ್ಯರು ಮತ್ತು ಪೊಲೀಸರಂತೆಯೇ ಹೋರಾಡುತ್ತಾ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ 15 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಒರಿಸ್ಸಾ ಸಿಎಂ ನವೀನ್​​ ಪಟ್ನಾಯಕ್​​ ಘೋಷಣೆ ಮಾಡಿದ್ದಾರೆ. ಹರಿಯಾಣ ಸಿಎಂ ಮನೋಹರ್‌ ಲಾಲ್‌ ಖಟ್ಟರ್‌ ಬೆನ್ನಲ್ಲೀಗ ನವೀನ್​​ ಪಟ್ನಾಯಕ್​ ಇಂತಹ ಮಹತ್ವದ ಯೋಜನೆ ಪ್ರಕಟಿಸಿದ್ದಾರೆ.

ಈ ಹಿಂದೆಯಷ್ಟೇ ಹರಿಯಾಣ ಸಿಎಂ ಮನೋಹರ್​​ ಲಾಲ್​ ಖಟ್ಟರ್​​, ಲಾಕ್‌ಡೌನ್‌ ಅಂತಹ ಕಠಿಣ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ 10 ಲಕ್ಷ ಜೀವ ವಿಮೆ ಘೋಷಿಸಿದ್ದರು. ಕೋವಿಡ್‌-19 ವಿರುದ್ಧದ ಹೋರಾಟದ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾನ್ಯತೆ ಪಡೆದಿರುವ ಎಲ್ಲಾ ಮಾಧ್ಯಮ ವ್ಯಕ್ತಿಗಳಿಗೆ ಜೂನ್ 30 ರವರೆಗೆ 10 ಲಕ್ಷ ರೂ.ಗಳ ಜೀವ ವಿಮಾ ರಕ್ಷಣೆಯ ಸೌಲಭ್ಯವನ್ನು ನೀಡಲಾಗುವುದು ಎಂದು ತಿಳಿಸಿದ್ದರು.

ಭಾರತದಲ್ಲಿ ಕೊರೋನಾ ವೈರಸ್​ ದಾಳಿಗೆ ಜನರು ತತ್ತರಿಸಿದ್ದಾರೆ. ದೇಶದ ಇದುವರೆಗಿನ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಇಂತಹ ಮಹಾರಾಷ್ಟ್ರದ ಮುಂಬೈವೊಂದರಲ್ಲೇ ವಿವಿಧ ಮಾಧ್ಯಮ ಸಂಸ್ಥೆಗಳ 53 ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡಿತ್ತು.

Leave A Reply

Your email address will not be published.