ರಸ್ತೆ ಬದಿ ನಿಲ್ಲಿಸಿದ್ದ ಬೈಕ್ಗಳಿಗೆ ಕಾರು ಡಿಕ್ಕಿ; ಪವಾಡ ಸದೃಶ ರೀತಿಯಲ್ಲಿ ಪಾರಾದ ಯುವಕರು – Kannada News | A young man miraculously escaped after a car collided with a bike parked on the side of the road near Kammasandra Gate in Hoskote Taluk
ಬೆಂಗಳೂರು ಗ್ರಾಮಾಂತರ, ಆ.6: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್(Bike)ಗಳಿಗೆ ಕಾರು(Car) ಡಿಕ್ಕಿಯಾಗಿ, ಬೈಕ್ ಮೇಲೆ ಕುಳಿತಿದ್ದ ಯುವಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗೇಟ್ ಬಳಿ ನಡೆದಿದೆ. ಅತಿವೇಗವಾಗಿ ಬಂದ ಕಿಯಾ ಕಾರೊಂದು, ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್ಗೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದೆ. ಈ ವೇಳೆ ಪವಾಡ ಸದೃಶ ರೀತಿಯಲ್ಲಿ ಬೈಕ್ ಸವಾರರು ಅಪಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ